
ಬಾಗಲಕೊಟೆ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ, ಬಿ.ಜೆ.ಪಿ ಬಾಗಲಕೋಟೆ ನಗರ ಮಂಡಲ ವತಿಯಂದ ಪ್ರತಿಭಟನೆ ಮಾಡಲಾಯಿತು.

j3tvkannada
ಬಿಜೆಪಿ ಕಾರ್ಯಾಲಯದಿಂದ ಪಾದಯಾತ್ರೆ ಮೂಲಕ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಮಂಗಳೂರಿನಲ್ಲಿ ಜನರಿರುವ ಸ್ಥಳದಲ್ಲಿಯೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಬರ್ಬರವಾಗಿ ಕೋಲೆ ಮಾಡಲಾಗಿದ್ದು, ರಾಜ್ಯ ಸರ್ಕಾರ ರಕ್ಷಣೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ದೂರಲಾಯಿತು.
ಬೆಳಗಾವಿ ಪ್ರಭಾರಿ ಬಸವರಾಜ ಯಂಕಂಚಿ ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ ಮಾತನಾಡಿ, ಹಿಂದೂಗಳ ಮೇಲೆ ನಿರಂತರವಾಗಿ ನಡೆಯುವತ್ತಿರುವ ಹಲ್ಲೆಗಳಿಗೆ ಸರ್ಕಾರವೇ ನೇರ ಹೊಣೆ ಎಂದರು.
ಗುಂಡುರಾವ್ ಶಿಂಧೆ, ಡಾ.ಎಂ.ಎಸ್.ದಡ್ಡೆನ್ನವರ, ರಾಜು ರೇವಣಕರ, ಯಲ್ಲಪ್ಪ ನಾರಾಯಣಿ, ಸಾಗರ ಬಂಡಿ, ಬಸವರಾಜ ಅವರಾದಿ, ರಾಜು ಶಿಂತ್ರೆ, ಶಂಕರ ಗಲಗ, ಅಶೋಕ ಪವಾರ, ದೂಳಪ್ಪ ಕೊಪ್ಪದ, ರವಿ ನಾಯಕ, ಸುರೇಶ ಮಜ್ಜಗಿ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ ಇನ್ನು ಮುಂತಾದವರು ಭಾಗವಹಿಸಿದ್ದರು.