
ಬೀದರ್: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆದಿ ಶಂಕರಾಚಾರ್ಯರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

j3tvkannada
ಹೆಚ್ಚುವರಿ ಜಿಲ್ಲಾಧಿಕಾರಿ ಶಕೀಲ್ ಅಹಮ್ಮದ್ ಹಾಗೂ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಕುಲಕರ್ಣಿ ಅವರು ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿದರು.
ಶಾಮಕಾಂತ ಕುಲಕರ್ಣಿ ಅವರು ಶಂಕರಾಚಾರ್ಯರ ಜೀವನ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂದೆ, ಮುಖಂಡರಾದ ಮನೋಹರ ದಂಡೆ, ರಾಜೇಶ ಕುಲಕರ್ಣಿ, ಸೂರ್ಯಕಾಂತ ಕುಲಕರ್ಣಿ, ಸುಧೀಂದ್ರ ಕುಲಕರ್ಣಿ, ಪ್ರಶಾಂತ ಜ್ಯಾಂತಿಕರ್, ಪ್ರಭಾಕರ ಕುಲಕರ್ಣಿ, ಅನಿಲ್ ಚಿಕ್ಕಮಣೂರ, ಮಾರ್ಖಂಡೆ ಕುಲಕರ್ಣಿ, ರಾಜೇಂದ್ರ ಕುಲಕರ್ಣಿ, ಗಿರೀಶ್ ಕುಲಕರ್ಣಿ, ಸತ್ಯದೀಪ ಮಂಗೋಲಿ, ಶ್ರೀಕಾಂತ ಕುಲಕರ್ಣಿ, ಪುರುಷೋತ್ತಮ ಪುರೋಹಿತ, ದತ್ತಾತ್ರೇಯ ಕುಲಕರ್ಣಿ, ಕಿಶೋರ ಕುಲಕರ್ಣಿ, ರಮೇಶ ಮೀನಕೇರಾ ಇನ್ನು ಮುಂತಾದವರು ಇದ್ದರು.
ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರಾಗಿ ವೆಂಕಟೇಶ್ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ. ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಈ ನೇಮಕ ಮಾಡಿ ಮಹಾಸಭಾದ ರಾಜ್ಯ ಅಧ್ಯಕ್ಷ ಎಸ್. ರಘುನಾಥ್ ಆದೇಶ ಹೊರಡಿಸಿದ್ದಾರೆ. ವೆಂಕಟೇಶ್ ಕುಲಕರ್ಣಿ ಇತ್ತೀಚೆಗೆ ನಡೆದ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು.