
ಬೆಂಗಳೂರು: ಬಾಲಿವುಡ್ ಗಾಯಕ ಸೋನು ನಿಗಮ್ ಅವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ, ಕನ್ನಡ ಸಂಘಟನೆ ಮುಖಂಡ ರೂಪೇಶ್ ರಾಜಣ್ಣ ಹಾಗೂ ಇತರೆ ಕಾರ್ಯಕರ್ತರು ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದರು.

j3tvkannada
ವಾಣಿಜ್ಯ ಮಂಡಳಿಯ ಮುಖ್ಯಸ್ಥರನ್ನು ಭೇಟಿಯಾದ ಕಾರ್ಯಕರ್ತರು, ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗ ನಿಷೇಧಿಸಬೇಕು ಎಂದು ಒತ್ತಾಯಿಸಿದರು. ಜತೆಗೆ ಈ ಹಿಂದೆ ಉತ್ತರ ಭಾರತ ಸೋನು ನಿಗಮ್ ಅವರನ್ನು ನಿರ್ಲಕ್ಷಿಸಿದಾಗ, ಕನ್ನಡಿಗರು ಪ್ರೀತಿ ಕೊಟ್ಟಿದ್ದಾರೆ. ಆದರೂ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿರುವುದು ಸರಿಯಲ್ಲ. ಆದ್ದರಿಂದ ಅವರನ್ನು ಕನ್ನಡ ಸಿನಿಮಾಗಳಿಂದ ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಸೋನು ನಿಗಮ್ ಅವರ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ರಾಜಾಜಿನಗರದಲ್ಲಿ ಪಕ್ಷದ ಕಚೇರಿಯ ಮುಂಭಾಗ ಸೋನು ನಿಗಮ್ ವಿರುದ್ಧ ಪ್ರತಿಭಟನೆ ನಡೆಸಿದರು.