
ತುಮಕೂರು: ಸಾಂಬಾರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಪುರ ಕಾಲೊನಿಯ ಹನುಮಂತ ಎಂಬುವvರನ್ನು ಕೊಲೆ ಮಾಡಿದ್ದ ಇಬ್ಬರಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ, ತಲಾ ₹1 ಲಕ್ಷ ದಂಡ ವಿಧಿಸಿದೆ.

j3tvkannada
ಪುರ ಕಾಲೊನಿಯ ಪರಮೇಶ್, ಆನಂದ್ ಜೀವಾವಧಿ ಶಿಕ್ಷೆಗೆ ಒಳಗಾದವರು. ಪರಮೇಶ್, ಆನಂದ್, ಹನುಮಂತ ಒಂದೇ ಕಡೆ ಕೆಲಸಕ್ಕೆ ಹೋಗುತ್ತಿದ್ದರು. ಮೂವರ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. 2021ರ ಏ. 20ರಂದು ಹನುಮಂತ ಸಾಂಬಾರ್ ವಿಚಾರಕ್ಕೆ ಮನೆಯಲ್ಲಿ ಜಗಳ ಮಾಡುತ್ತಿದ್ದರು. ಇದೇ ಸಮಯದಲ್ಲಿ ಮನೆಗೆ ನುಗ್ಗಿದ ಪರಮೇಶ್, ಆನಂದ್ ಹನುಮಂತರನ್ನು ಎಳೆದುಕೊಂಡು ಬಂದು ಕೊಲೆ ಮಾಡಿದ್ದರು.
ಈ ಕುರಿತು ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಎಫ್.ಕೆ.ನದಾಫ್ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಯಾಸ್ಮಿನ್ ಪರ್ವೀನ್ ಲಾಡ್ಖಾನ್ ಪ್ರಕರಣದ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಕೆ.ಸಿ.ದೀಪಕ್ ವಾದ ಮಂಡಿಸಿದ್ದರು.