ಹಾವೇರಿ: ಸಾಹಿತ್ಯಕ, ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕವಾಗಿ ಶ್ರೇಷ್ಠತೆ ಪಡೆದಿರುವ ಜಿಲ್ಲೆ ಹಾವೇರಿ. ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದಿನ ಲೋಕಾಸಭಾ ಚುನಾವಣೆಯಲ್ಲೂ ಹಾವೇರಿ-ಗದಗ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ತಾಲ್ಲೂಕಿನ ಅಕ್ಕಿಆಲೂರಿನ ಎ.ಪಿ.ಎಂ.ಸಿ ಮಾರುಕಟ್ಟೆ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹಾನಗಲ್ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

j3tvkannada
ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿ, ಸುಳ್ಳಿನ ಸರದಾರರೂ ಆಗಿದ್ದಾರೆ. ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಪ್ರಶ್ನಿಸಿದರು.
ಮಾಜಿ ಮುಖ್ಯಮಂತ್ರಿಯೂ ಆಗಿರುವ ಸಂಸದ ಬಸವರಾಜ ಬೊಮ್ಮಾಯಿ, ಈ ಅಕ್ಕಿಆಲೂರಿನ ಅಳಿಯ. ಕ್ಷೇತ್ರಕ್ಕೆ ಏನು ಮಾಡಿದ್ದಾರೆ ಎಂಬುದನ್ನು ಜನರೇ ಉತ್ತರಿಸಲಿ ಎಂದು ಸವಾಲು ಹಾಕಿದರು. ಬಿ.ಜೆ.ಪಿಯವರಿಗೆ ಸುಳ್ಳೇ ಮನೆಯ ದೇವರು. ನನ್ನ ಮೇಲೆ ಮಾಡಬಾರದ ಆರೋಪ ಮಾಡಿದರು. ಅದರಲ್ಲಿ ಎಳ್ಳಷ್ಟು ನಿಜವಿಲ್ಲ. ಜನ ನಮ್ಮನ್ನು ಮೆಚ್ಚಿಕೊಂಡಿದ್ದಾರೆ. ಸ್ವಕ್ಷೇತ್ರದ ಉಪ ಚುನಾವಣೆಯಲ್ಲಿಯೇ ಬಸವರಾಜ ಬೊಮ್ಮಾಯಿ, 14 ಸಾವಿರ ಮತಗಳಿಂದ ತಮ್ಮ ಪುತ್ರನ ಸೋಲನ್ನು ನೋಡಬೇಕಾಯಿತು ಎಂದರು.
ಶಾಸಕ ಶ್ರೀನಿವಾಸ ಮಾನೆ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮುಂದೆ ರಾಜಕೀಯದಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಹೇಳಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಈ ಭಾಗದ ಸಮಗ್ರ ನೀರಾವರಿಗಾಗಿ ವರದಾ ಬೇಡ್ತಿ ನದಿ ಜೋಡಣೆ ಯೋಜನೆಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದ್ದು, ಅದರ ಅನುಷ್ಠಾನಕ್ಕಾಗಿ ಹಾಕುತ್ತಿದ್ದೇವೆ. ಕುಸುಮ ಯೋಜನೆಯಡಿ ಪ್ರತಿ ತಾಲ್ಲೂಕಿನಲ್ಲಿ 20 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪಿಸಿ, ರೈತರ ಪಂಪ್ಸೆಟ್ಗಳಿಗೆ ಹಗಲು ಹೊತ್ತಿನಲ್ಲಿ ವಿದ್ಯುತ್ ನೀಡಲು ಸರ್ಕಾರ ನಿರ್ಣಯ ಕೈಗೊಂಡಿದೆ ಎಂದರು.

j3tvkannada
ಸಚಿವರಾದ ಶಿವಾನಂದ ಪಾಟೀಲ, ಸತೀಶ ಜಾರಕಿಹೊಳಿ, ಶಾಸಕರಾದ ಶ್ರೀನಿವಾಸ್ ಮಾನೆ, ಯಾಸೀರ್ ಅಹ್ಮದ್ ಖಾನ್ ಪಠಾಣ, ಪ್ರಕಾಶ ಕೋಳಿವಾಡ, ಸಲೀಂ ಅಹ್ಮದ್, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ್ ಖಾದ್ರಿ, ಗಡಿ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಹಾನಗಲ್ ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ, ಅಕಿ ಆಲೂರು ಗ್ರಾಮ ಪಂಚಾಯಿತಿ ಅದಕ ಮಖಬೂಲ್ ಅಹ್ಮದ್ ರುಸುಂಖಾನವರ. ಜಿಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಸಿ.ಇ.ಒ ರುಚಿ ಬಿಂದಲ್, ತಹಶೀಲ್ದಾರ್ ರೇಣುಕಾ ಎಸ್. ಇದ್ದರು.
ಹಾನಗಲ್ ಪಟ್ಟಣದಲ್ಲಿ ಇತ್ತೀಚಿನ ದಿನಗಳಲ್ಲಿ ವಾಹನಗಳ ದಟ್ಟಣೆ ಉಂಟಾಗುತ್ತಿದೆ. ಇದನ್ನು ನಿಯಂತ್ರಿಸಲು ಪಟ್ಟಣದ ಹೊರವಲಯದ ರಸ್ತೆಯನ್ನು ಹೆದ್ದಾರಿಯನ್ನಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸಮಾರಂಭದಲ್ಲಿ ಮಾತನಾಡಿದ ಅವರು ಹಾನಗಲ್ ಹೆದ್ದಾರಿ ರಸ್ತೆ ನಿರ್ಮಾಣಕ್ಕಾಗಿ 9 ಕಿ.ಮೀ ಅಂತರದ ಸಮೀಕ್ಷೆ ಕಾರ್ಯ ಸದ್ಯದಲ್ಲೇ ಶುರುವಾಗಲಿದೆ. ನಂತರ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದರು.