
ಆನೇಕಲ್(ಬೆಂಗಳೂರು ಗ್ರಾಮಾಂತರ): ತಾಲ್ಲೂಕಿಗೆ ಸುಸಜ್ಜಿತ ಇ.ಎಸ್.ಐ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದಿದ್ದು, ಕಾಮಗಾರಿಕೆಗೆ ವೇಗ ನೀಡುವಂತೆ ಕಾರ್ಮಿಕ ಇಲಾಖೆಗೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಬಿ. ಶಿವಣ್ಣ ಹೇಳಿದರು. ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಕೆ.ಪಿ.ಸಿ.ಸಿ ಕಾರ್ಮಿಕ ಘಟಕದಿಂದ ಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದರು. ತಾಲ್ಲೂಕಿನಲ್ಲಿ ಐದು ಕೈಗಾರಿಕಾ ಪ್ರದೇಶಗಳಿದ್ದು ಸಹಸ್ರಾರು ಮಂದಿ ಕಾರ್ಮಿಕರು ವಾಸಿಸುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬ ಕಾರ್ಮಿಕರಿಗೂ ದೊರೆಯಬೇಕಾದ ಸಾಮಾಜಿಕ ಮತ್ತು ಆರೋಗ್ಯ ಸೌಲಭ್ಯ ಕಲ್ಪಿಸುವ ಪ್ರಯತ್ನ ನಡೆಸಲಾಗುವುದು.

j3tvkannada
ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಮಿಕ ಸ್ನೇಹಿ ವಾತಾವರಣ ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದ ಕೈಗಾರಿಕೆಗಳ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ತಾಲೂಕು ಪ್ರಧಾನ ಕಾರ್ಯದರ್ಶಿ ರಾಮಸಾಗರ ಶ್ರೀನಿವಾಸ್, ಹೆಬ್ಬಗೋಡಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಬನಹಳ್ಳಿ ಅಭಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗಣ್ಣ, ರಘುಪತಿರೆಡ್ಡಿ, ಮುಖಂಡರಾದ ಹೀಲಲಿಗೆ ನಾಗವೇಣಿ, ಗುಡ್ಡಹಟ್ಟಿ ನವೀನ್, ಶ್ರೀನಿವಾಸ್, ಯೋಗಾನಂದ, ಕುಮಾರ್, ಪ್ರಶಾಂತ್, ಅರ್ಜುನ್, ಸತ್ಯನಾರಾಯಣ ಇದ್ದರು.