
ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದೆ. ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ 26 ಪ್ರವಾಸಿಗರನ್ನ ಭಯೋತ್ಪಾದಕರು ಕೊಂದರು. ಈಗ ಭಾರತ ವೈಮಾನಿಕ ದಾಳಿಯ ಮೂಲಕ 70 ಭಯೋತ್ಪಾದಕರ ಸಂಹಾರ ಮಾಡಿದೆ. ಭಾರತೀಯ ಸೇನೆ ಮತ್ತು ವಾಯುಪಡೆ ಒಟ್ಟಾಗಿ ಪಾಕ್ನಲ್ಲಿರೋ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿವೆ. ಆಪರೇಷನ್ ಸಿಂಧೂರದ ಬಗ್ಗೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಭಾರತೀಯ ಸೇನೆಯ ಕಾರ್ಯವನ್ನು ಕೊಂಡಾಡಿದ್ದಾರೆ.

j3tvkannada
ಭಯೋತ್ಪಾದನೆಗೆ ಜಾಗವಿಲ್ಲ-ಸಿ.ಎಂ ಸಿದ್ದರಾಮಯ್ಯ ಟ್ವೀಟ್
ಆಪರೇಷನ್ ಸಿಂಧೂರ್ ಹಿಂದೆ ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಧೈರ್ಯಕ್ಕೆ ನಾನು ವಂದಿಸುತ್ತೇನೆ. ಅವರ ವೀರೋಚಿತ ಕ್ರಮವು ಭಾರತವು ಯಾವುದೇ ರೀತಿಯ ಭಯೋತ್ಪಾದನೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ಪುನರುಚ್ಚರಿಸುತ್ತದೆ.